More than 50 people fall ill after consuming prasad at fair
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.
ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ ಭಕ್ತರಿಗೆ ಮೊಸರನ್ನ ಹಾಗೂ ಬಿಸಿ ಬೇಳೆ ಬಾತ್ ಹಂಚಿಕೆ ಮಾಡಲಾಗಿತ್ತು. ಸುಮಾರು ಒಂದೂವರೆ ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗಿತ್ತು.
ಪ್ರಸಾದ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಅನೇಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಸಾದ ಸೇವಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಂಡಿದ್ದರಿಂದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಭಕ್ತರು ಸೇವಿಸಿದ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…