More than 50 people fall ill after consuming prasad at fair
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ.
ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ ಭಕ್ತರಿಗೆ ಮೊಸರನ್ನ ಹಾಗೂ ಬಿಸಿ ಬೇಳೆ ಬಾತ್ ಹಂಚಿಕೆ ಮಾಡಲಾಗಿತ್ತು. ಸುಮಾರು ಒಂದೂವರೆ ಸಾವಿರ ಜನರಿಗೆ ಪ್ರಸಾದ ವಿತರಣೆ ಮಾಡಲಾಗಿತ್ತು.
ಪ್ರಸಾದ ಸೇವನೆ ಬಳಿಕ ಹೊಟ್ಟೆ ನೋವು, ವಾಂತಿಯಿಂದ ಅನೇಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಸಾದ ಸೇವಿಸಿದ ಕೂಡಲೇ ಚಿಕಿತ್ಸೆ ಪಡೆದುಕೊಂಡಿದ್ದರಿಂದ ಭಕ್ತರು ಅಪಾಯದಿಂದ ಪಾರಾಗಿದ್ದಾರೆ. ಭಕ್ತರು ಸೇವಿಸಿದ ಪ್ರಸಾದದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ಗೆ ರವಾನೆ ಮಾಡಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…