ಹಾಸನ: ಆರ್ಎಸ್ಎಸ್ಗೂ ‘ಭಾರತ ಐಕ್ಯತಾ ಯಾತ್ರೆಗೂ ಏನು ಸಂಬಂಧ, ಆರ್ಎಸ್ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು.
ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಪ್ರತಿಪಕ್ಷವಾಗಿ ದೇಶದಲ್ಲಿ ಏನು ಮಾಡಬೇಕಿತ್ತೋ ಆ ಕೆಲಸ ಮಾಡುವಲ್ಲಿ ವಿಫಲವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದೂರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈ ಎಳೆದು ಜೋಡಿಸೋ ಪ್ರಯತ್ನವನ್ನು ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಜ್ಯದುದ್ದಕ್ಕೂ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ಹೇಗೆ ಮಾತನಾಡುತ್ತಿದ್ದಾರೆ ಅನ್ನೋದನ್ನ ನಾವು ನೋಡುತ್ತಿದ್ದೇವೆ. ಭಾರತ ಐಕ್ಯತಾ ಯಾತ್ರೆ ಉದ್ದಕ್ಕೂ ಮುಸ್ಲಿಮರ ಮತ ಸೆಳೆಯಲು ಮಾತನಾಡಿದ್ದಾರೆಯೇ ಹೊರತು, ದೇಶಕ್ಕಾಗಿ ಮಾತನಾಡಿಲ್ಲ ಎಂದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…