Mysore
27
overcast clouds

Social Media

ಬುಧವಾರ, 01 ಜುಲೈ 2026
Light
Dark

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

H D Kumaraswamy

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಮಾತನಾಡಿದ ಅವರು, ಭ್ರಷ್ಟ ಸರ್ಕಾರ ತೆಗೆಯಲು ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್‌ ಪಕ್ಷ ಸ್ಥಾಪನೆ ಮಾಡಿ 25 ವರ್ಷ ಆಗಿದೆ. ದೇವೇಗೌಡರ ಜನ್ಮಭೂಮಿಯಲ್ಲೇ ಬೆಳ್ಳಿಹಬ್ಬ ಮಾಡುತ್ತಿದ್ದೇವೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷವನ್ನು ಸದೃಢ ಮಾಡಲು ಸಮಾವೇಶ ಮಾಡುತ್ತಿದ್ದೇವೆ. ಜೆಡಿಎಸ್‌ ಪಕ್ಷ ನಾಶವಾಗಲಿ ಎಂದು ವಿಪಕ್ಷಗಳು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದು ರೈತರಿಂದ ಬೆಳೆದ ಪಕ್ಷ. ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದರು.

Tags:
error: Content is protected !!