ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್ ಮೀಟ್ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ ಅವರು, ಹಾಸನದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆಯಲಾಗಿದೆ. ಬಾರ್ಗಳಲ್ಲಿ ಕುಡಿದು ಅನಾಹುತ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಜನರು ಬೀಗರೂಟದಲ್ಲಿ ಹೆಚ್ಚು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆ. ಬಾರ್ಗಳಲ್ಲಿ ಕೂಡ ಹೆಚ್ಚಿನ ಜನರು ಮದ್ಯ ಕುಡಿದು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…