ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಸ್ವರೂಪ್ ಹಾಗೂ ಭವಾನಿ ರೇವಣ್ಣ ಹೆಸರಿನ ನಡುವೆ ಮತ್ತೊಂದು ಹೆಸರು ತೇಲಿಬಂದಿದೆ. ಸಾಮಾನ್ಯ ಕಾರ್ಯಕರ್ತ ಹೆಸರಿನಲ್ಲಿ ಅಂತಿಮವಾಗಿ ಸ್ವರೂಪ್ಗೆ ಟಿಕೆಟ್ ನೀಡಿದರೆ ಭವಾನಿ ಬೆಂಬಲಿಗರು ಸಿಡಿದೇಳು ಭೀತಿ ಇದೆ. ಇನ್ನು ಭವಾನಿಗೆ ಟಿಕೆಟ್ ನೀಡಿದರೆ ಸ್ವರೂಪ್ ಬೆಂಬಲಿಗರು ಅಸಮಾಧಾನಗೊಳ್ಳುವ ಸಾಧ್ಯತೆಗಳು ಇವೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ ಹೊಸ ಮುಖಕ್ಕೆ ಮಣೆ ಹಾಕಲು ಜೆಡಿಎಸ್ ವರಿಷ್ಠರು ತಂತ್ರ ರೂಪಿಸಿದ್ದಾರೆ.
ಜೆಡಿಎಸ್ನ ಹಿರಿಯ ನಾಯಕ, ಹಾಸನ ನಗರಾಭಿವೃದ್ಧಿ ಪ್ರಾದಿಕಾರದ ಮಾಜಿ ಅದ್ಯಕ್ಷ ಕೆ.ಎಂ.ರಾಜೇಗೌಡ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಆ ಹೆಸರು ಕ್ಷೇತ್ರದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಹಾಸನ ಜಿಲ್ಲಾ ರಾಜಕಾರಣದಲ್ಲಿ ಸಂಚನ ಮೂಡಿಸಿದೆ. ತಮ್ಮನ್ನ ಕಡೆಗಣಿಸಿ ಸ್ಚರೂಪ್ ಟಿಕೆಟ್ ಪಡೆದರೆ ತಮ್ಮ ನಾಯಕತ್ವ ಜಿಲ್ಲೆಯಲ್ಲಿ ಕುಗ್ಗಿದಂತಾಗುತ್ತದೆ ಎಂದು ಅರಿತ ರೇವಣ್ಣ, ತಮ್ಮ ಆಪ್ತ, ಹಾಗೂ ಮಖ್ಯವಾಗಿ ದೇವೇಗೌಡರ ಜೊತೆಗೂ ಒಡನಾಟ ಇರುವ ರಾಜೇಗೌಡರ ಹೆಸರು ಪ್ರಸ್ತಾಪಿಸಿದ್ದಾರೆ.
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್ನ ಮುಂದಿನ ಸರ್ವೋಚ್ಛ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…