ಹಾಸನ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ ; 2 ಕೋಟಿ ಆದಾಯ

ಬೆಂಗಳೂರು : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಾರಾಂತ್ಯದ ಹಿನ್ನೆಯಲ್ಲಿ ಭಾನುವಾರ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರೆ, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದರು. ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಖುದ್ದು ದೇವಾಲದಲ್ಲೇ ಹಾಜರಿದ್ದು ಭಕ್ತರ ಕುಂದುಕೊರತೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ.

ಇದನನ್ನು ಓದಿ : ಹಾಸನಾಂಬೆ ದರ್ಶನಕ್ಕೆ ಟೂರ್‌ ಪ್ಯಾಕೇಜ್‌ : ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಿಂದ ಸಾರಿಗೆ ಸೌಲಭ್ಯ

ಶುಕ್ರವಾರದಿಂದ ಆರಂಭವಾದ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಕ್ತರ ಅಪಾರ ದರ್ಶನದಿಂದ ಕೇವಲ ಎರಡೇ ದಿನಗಳಲ್ಲಿ 2.24 ಕೋಟಿರೂ. ಆದಾಯ ದಾಖಲಿಸಿದೆ. ಭಾನುವಾರ ಬೆಳಿಗ್ಗೆ 8 ಗಂಟೆಯವರೆಗೆ ₹300 ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ. ಅದೇ ರೀತಿ ₹1000 ವಿಶೇಷ ದರ್ಶನದಲ್ಲಿ ಒಟ್ಟು 12,396 ಮಾರಾಟವಾಗಿವೆ.

ಇದೇ ವೇಳೆ ಲಾಡು ಪ್ರಸಾದ ಮಾರಾಟದ ಸಂಖ್ಯೆ 17,337 ಆಗಿದ್ದು, ಮೂರು ದಿನಗಳಲ್ಲಿ ಭಾರಿ ಆದಾಯ ಲಭಿಸಿದೆ. 300ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ ಒಟ್ಟು 83,27,700 ರೂ ಹಾಗೂ 1000 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ 1,23,96,000 ರೂ. ಲಾಡು ಪ್ರಸಾದ ಮಾರಾಟದಿಂದ 17,33,700 ರೂ. ಸೇರಿ ಒಟ್ಟು ಆದಾಯ ₹2 ಕೋಟಿ 24 ಲಕ್ಷ 57 ಸಾವಿರ 400 ರೂ. ಸಂಗ್ರಹವಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಕ್ಟೋಬರ್ 23 ರಂದು ದೇವಿಯ ದರ್ಶನ ಮುಕ್ತಾಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago