ಹಾಸನ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ ; 2 ಕೋಟಿ ಆದಾಯ

ಬೆಂಗಳೂರು : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಾರಾಂತ್ಯದ ಹಿನ್ನೆಯಲ್ಲಿ ಭಾನುವಾರ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರೆ, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದರು. ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಖುದ್ದು ದೇವಾಲದಲ್ಲೇ ಹಾಜರಿದ್ದು ಭಕ್ತರ ಕುಂದುಕೊರತೆಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ.

ಇದನನ್ನು ಓದಿ : ಹಾಸನಾಂಬೆ ದರ್ಶನಕ್ಕೆ ಟೂರ್‌ ಪ್ಯಾಕೇಜ್‌ : ಮೈಸೂರು, ಬೆಂಗಳೂರು ಮತ್ತಿತರ ಕಡೆಗಳಿಂದ ಸಾರಿಗೆ ಸೌಲಭ್ಯ

ಶುಕ್ರವಾರದಿಂದ ಆರಂಭವಾದ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಭಕ್ತರ ಅಪಾರ ದರ್ಶನದಿಂದ ಕೇವಲ ಎರಡೇ ದಿನಗಳಲ್ಲಿ 2.24 ಕೋಟಿರೂ. ಆದಾಯ ದಾಖಲಿಸಿದೆ. ಭಾನುವಾರ ಬೆಳಿಗ್ಗೆ 8 ಗಂಟೆಯವರೆಗೆ ₹300 ವಿಶೇಷ ದರ್ಶನದಲ್ಲಿ ಒಟ್ಟು 27,759 ಟಿಕೆಟ್‌ಗಳು ಮಾರಾಟವಾಗಿವೆ. ಅದೇ ರೀತಿ ₹1000 ವಿಶೇಷ ದರ್ಶನದಲ್ಲಿ ಒಟ್ಟು 12,396 ಮಾರಾಟವಾಗಿವೆ.

ಇದೇ ವೇಳೆ ಲಾಡು ಪ್ರಸಾದ ಮಾರಾಟದ ಸಂಖ್ಯೆ 17,337 ಆಗಿದ್ದು, ಮೂರು ದಿನಗಳಲ್ಲಿ ಭಾರಿ ಆದಾಯ ಲಭಿಸಿದೆ. 300ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ ಒಟ್ಟು 83,27,700 ರೂ ಹಾಗೂ 1000 ರೂ. ವಿಶೇಷ ದರ್ಶನ ಟಿಕೆಟ್‌ಗಳಿಂದ 1,23,96,000 ರೂ. ಲಾಡು ಪ್ರಸಾದ ಮಾರಾಟದಿಂದ 17,33,700 ರೂ. ಸೇರಿ ಒಟ್ಟು ಆದಾಯ ₹2 ಕೋಟಿ 24 ಲಕ್ಷ 57 ಸಾವಿರ 400 ರೂ. ಸಂಗ್ರಹವಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಕ್ಟೋಬರ್ 23 ರಂದು ದೇವಿಯ ದರ್ಶನ ಮುಕ್ತಾಯವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

39 mins ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

45 mins ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

2 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

3 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

4 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

4 hours ago