ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ.
ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಆನೆಗಳು ಈ ತಂಡದಲ್ಲಿವೆ. ಇಂದಿನಿಂದಲೇ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಸ್ಥಳೀಯರ ಒತ್ತಾಯಕ್ಕೆ ಮಣಿದು ಕೊಡಗು ಭಾಗದಿಂದ ಬಂದ ಈ ನರಹಂತಕ ಆನೆಯನ್ನು ಸೆರೆಹಿಡಿಯಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದರು.
ಇತ್ತೀಚೆಗೆ ಆಲೂರು ಸಮೀಪ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಶೋಭ ಅವರ ಮೇಲೆ ಕಾಡಾನೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹ ಮೇಲೆತ್ತಲು ಬಿಡದೇ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ಶಾಸಕ ಸಿಮೆಂಟ್ ಮಂಜು ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಕರೆ ಮಾಡಿ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವಂತೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪುಂಡಾನೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…