ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ.
ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಧ್ಯಾಹ್ನದ ನಂತರ ಥರ್ಮಲ್ ದ್ರೋಣ್ ಬಳಸಿ ಕಾಡಾನೆ ಪತ್ತೆ ಮಾಡಿ ಅದಕ್ಕೆ ವೈದ್ಯರು ಅರವಳಿಕೆ ಚುಚ್ಚುಮದ್ದು ನೀಡಲು ಮುಂದಾಗಿದ್ದರು. ಆದರೆ ಕಾರ್ಯಾಚರಣೆ ನಡೆಸುವ ಸ್ಥಳದಲ್ಲಿ ವಿಕ್ರಾಂತ್ ಆನೆ ಹೊರತುಪಡಿಸಿ ಬೇರೆ ಆನೆ ಇದ್ದವು. ಈ ಹಿನ್ನೆಲೆಯಲ್ಲಿ ಇಂದಿನ ಕಾರ್ಯಾಚರಣೆ ಸ್ಥಗಿತವಾಗಿದ್ದು, ನಾಳೆಯೂ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆಯಿದೆ.
ಸುಮಾರು ಇನ್ನೂರಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಜೊತೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು ಏಳು ಸಾಕಾನೆಗಳು ಕೂಡ ಭಾಗಿಯಾಗಿದ್ದವು. ಆದರೆ ವಿಕ್ರಾಂತ್ ಆನೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದು, ಸತತ ಎರಡು ದಿನಗಳ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದೆ.
ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾಕಾನೆಗಳು ಹೈರಾಣಾಗಿದ್ದು, ಹೇಗಾದರೂ ಮಾಡಿ ವಿಕ್ರಾಂತ್ ಆನೆಯನ್ನು ಸೆರೆಹಿಡಿಯಲೇಬೇಕು ಎಂದು ಪಣ ತೊಟ್ಟಿದ್ದಾರೆ.
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…