Mysore
28
light rain

Social Media

ಗುರುವಾರ, 11 ಜೂನ್ 2026
Light
Dark

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.‌5ರಂದು ಸಂಜೆ ಸುಮಾರು 6.30ರ ಸಮಯದಲ್ಲಿ ಬಿ.ಎಚ್.ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು, ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.

 

Tags:
error: Content is protected !!