ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಅರಸೀಕೆರೆ ತಾಲ್ಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್.5ರಂದು ಸಂಜೆ ಸುಮಾರು 6.30ರ ಸಮಯದಲ್ಲಿ ಬಿ.ಎಚ್.ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು, ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…