ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು ಕೇಳಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಒಳ್ಳೆಯ ಕೆಲಸ ನೋಡಿ ಜನ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗ ಜಮ್ಮು-ಕಾಶ್ಮೀರಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕಠಿಣ ನಿಲುವಿನೊಂದಿಗೆ ಜಮ್ಮು-ಕಾಶ್ಮೀರದಲ್ಲಿ ಅಕ್ರಮವನ್ನು ನಿಯಂತ್ರಿಸಲಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಶ್ಮೀರದಲ್ಲಿರುವ ಶಿವನ ದೇವಾಲಯಕ್ಕೆ 230 ಮೆಟ್ಟಿಲುಗಳಿವೆ. ನಾನು 30 ಮೆಟ್ಟಿಲುಗಳನ್ನು ಹತ್ತಿದೆ. ನಂತರ ಸಿಆರ್ಪಿಎಫ್ ಯೋಧರು ನನ್ನನ್ನು ದೇವಾಲಯಕ್ಕೆ ಕರೆದುಕೊಂಡು ಹೋದರು. ಬಳಿಕ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದೆ ಎಂದು ಮಾಹಿತಿ ನೀಡಿದರು.
ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಪ್ರಧಾನಿ ನರೇಂದ್ರ ಮೋದಿಯವರ ಕಠಿಣ ಪರಿಶ್ರಮವಿದೆ. ಅದಕ್ಕಾಗಿ ಜಮ್ಮು-ಕಾಶ್ಮೀರದ ಜನತೆ ಸೂಕ್ತ ಪಕ್ಷ ಹಾಗೂ ಸೂಕ್ತ ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…