ಹಾಸನ

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು : 11 ಲಕ್ಷ ದಂಡ

ಹಾಸನ : ಗರ್ಭಿಣಿಯ ಸಾವಿಗೆ ವೈದ್ಯರನಿರ್ಲಕ್ಷ್ಯವೇ ಕಾರಣ ಎಂಬುದು ಸಾಬೀತಾದ ಹಿನ್ನೆಲೆ ಸಕಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಿಗೆ 11 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಹಾಸನದ ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಪುರುಷೋತ್ತಮ್‌ಗೆ ದಂಡ ವಿಧಿಸಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ ಆದೇಶ ಹೊರಡಿಸಿದೆ.

ಸಕಲೇಶಪುರ ತಾಲೂಕಿನ ಆನೆಮಹಲ್ ಗ್ರಾಮದ ನಿವಾಸಿ ಹಾಗೂ ಹೆಚ್‌ಎಂ ಮೋಹನ್‌ಕುಮಾರ್ ಅವರ ಪತ್ನಿ ವಿಎಂ ಆಶಾ 2021ರ ಮಾರ್ಚ್ 26ರಂದು ಬೆಳಗ್ಗೆ 11 ಗಂಟೆ ವೇಳೆಗೆ ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ಹೆರಿಗೆ ಪೂರ್ವ ತಪಾಸಣೆಗಾಗಿ ಬಂದಿದ್ದರು. ಬೆಳಗ್ಗೆ ಬಂದಿದ್ದ ಆಶಾ ಅವರನ್ನು ಡಾ. ಪುರುಷೋತ್ತಮ್ ಸಂಜೆ 4 ಗಂಟೆ ವೇಳೆಗೆ ಬನ್ನಿ ಎಂದು ತಿಳಿಸಿದ್ದರು. 4 ಗಂಟೆಗೆ ಬಂದಾಗ ಆಶಾ ಅವರನ್ನು ಪರೀಕ್ಷಿಸಲಾಗಿದ್ದು, ಸ್ಕ್ಯಾನ್ ವರದಿಯನ್ವಯ ಮಗು ಹೊಟ್ಟೆಯಲ್ಲೇ ಸಾವನ್ನಪ್ಪಿದೆ ಎಂದು ಪುರುಷೋತ್ತಮ್ ತಿಳಿಸಿದ್ದರು.

ಇದಕ್ಕೂ ಮೊದಲು ಆಶಾ ಪತಿ ಮೋಹನ್‌ಕುಮಾರ್ ಪತ್ನಿಗೆ ಶಸ್ತ್ರ ಚಿಕಿತ್ಸೆ ಮಾಡುವಂತೆ ವೈದ್ಯರಲ್ಲಿ ಮನವಿ ಮಾಡಿದ್ದರು. ಆದರೆ ಮೋಹನ್‌ಕುಮಾರ್ ಮನವಿ ತಿರಸ್ಕರಿಸಿ, ಶಸ್ತ್ರಚಿಕಿತ್ಸೆಯನ್ನು ಮಾಡದೇ ಪುರುಷೋತ್ತಮ್ ಕೇವಲ ಇಂಜೆಕ್ಷನ್ ನೀಡಿದ್ದರು. ಅದೇ ದಿನ ರಾತ್ರಿ ಆಶಾ ತೀವ್ರ ಹೊಟ್ಟೆನೋವಿನಿಂದ ನರಳಾಡಿ ಕೋಮಾ ಸ್ಥಿತಿಗೆ ಹೋಗಿದ್ದರು.

ಮರುದಿನ ಬೆಳಗ್ಗೆ ಆಶಾ ಅವರನ್ನು ಪುರುಷೋತ್ತಮ್ ಬಂದು ಪರೀಕ್ಷಿಸಿದ್ದು, ಆಕೆಯ ಆರೋಗ್ಯದ ಗಂಭೀರತೆ ಅರಿತು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸುವಂತೆ ತಿಳಿಸಿದ್ದರು. ಬಳಿಕ ಅಲ್ಲಿ ಆಶಾಳಿಗೆ ಶಸ್ತ್ರಚಿಕಿತ್ಸೆ ಮಾಡಿ, ಮಾಚ್ 29 ರಂದು ಹೆಚ್ಚಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಪತ್ನಿ ಆಶಾ ಸಾವಿಗೆ ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುರುಷೋತ್ತಮ್ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಮೋಹನ್‌ಕುಮಾರ್ ಆರೋಪಿಸಿ, ಪರಿಹಾರಕ್ಕಾಗಿ ಹಾಸನದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಅಧ್ಯಕ್ಷ ಸಿ.ಎಂ. ಚಂಚಲ, ಸದಸ್ಯ ಹೆಚ್.ವಿ ಮಹಾದೇವ ಹಾಗೂ ಮಹಿಳಾ ಸದಸ್ಯೆ ಆರ್ ಅನುಪಮ ಒಳಗೊಂಡ ಪೀಠ ಡಾ.ಪುರುಷೋತ್ತಮ್ ಅವರ ವೈದ್ಯಕೀಯ ನಿರ್ಲಕ್ಷ್ಯದಿಂದ ಆಶಾ ಸಾವು ಸಾಬೀತಾಗಿದೆ ಎಂದು ತಿಳಿಸಿದೆ. ಡಾ. ಪುರುಷೋತ್ತಮ್‌ಗೆ ದಂಡ ವಿಧಿಸಿ ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ಅಧ್ಯಕ್ಷೆ ಸಿ.ಎಂ ಚಂಚಲ ತೀರ್ಪು ಪ್ರಕಟಿಸಿದ್ದಾರೆ.

lokesh

Recent Posts

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

28 mins ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…

2 hours ago

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…

2 hours ago

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

2 hours ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

3 hours ago