ಹಾಸನ

ಚೌಳಗೆರೆಯಲ್ಲಿ ಟೋಲ್ ನಲ್ಲಿ ಶುಲ್ಕ ವಸೂಲಿಗೆ ಸಿದ್ಧತೆ ; ಪ್ರಾಧಿಕಾರದ ವಿರುದ್ಧ ಜನರ ಆಕ್ರೋಶ

ಹಾಸನ  : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್‌ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್‌ ಎಚ್‌ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, ಮಣ್ಣು ಕುಸಿಯುತ್ತಿದೆ. ಈ ಕಾಮಗಾರಿ ಯಾವಾಗ ಮುಗಿಯುವುದು..?  ಇದರ ನಡುವೆ ಬೈರಾಪುರದಲ್ಲಿ ಗೋಡೆ ಹಾಗೂ ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದರು.

ಅಲ್ಲದೆ ಇದು ಕೇವಲ ಸಾರ್ವಜನಿಕರ ಆರೋಪವಲ್ಲ, ಜನಪ್ರತಿನಿಧಿಗಳಿಂದಲೂ ಕಳಪೆ ಕಾಮಗಾರಿ ಆರೋಪ ಕೇಳಿಬರುತ್ತಿದೆ. ಇದಿಷ್ಟೇ ಅಲ್ಲ ಜಿಲ್ಲೆಯಲ್ಲಿ ಸಾಕಷ್ಟು ಅವೈಜ್ಷಾನಿಕ ಕಾಮಗಾರಿ ನಡೆಸುತ್ತಿರುವುದು ಕಾಣುತ್ತಿದೆ. ಇಷೆಲ್ಲಾ ಸಮಸ್ಯೆಗಳ ಕಣ್ಣೇದುರೇ ಹೆದ್ದಾರಿ ಪ್ರಾಧಿಕಾರ ಚೌಳಗೆರೆ ಬಳಿ ಆತುರಾತುರದಲ್ಲಿ ಟೋಲ್‌ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಇದನ್ನ ನಿಲ್ಲಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

20 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

3 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

7 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

7 hours ago