ಹಾಸನ

ಪ್ರಚೋದನಕಾರಿ ಭಾಷಣ: ಪ್ರಮೋದ್‌ ಮುತಾಲಿಕ್‌ ವಿರುದ್ಧ ಪ್ರಕರಣ ದಾಖಲು

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಜನವರಿ.9 ರಂದು ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಭಾಷಣ ಸಮಾಜಕ್ಕೆ ಪ್ರಚೋದನಕಾರಿ ಎಂಬ ಆರೋಪದ ಮೇಲೆ ಪ್ರಮೋದ್‌ ಸೇರಿದಂತೆ ಇನ್ನಿತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮೋದ್‌ ಮುತಾಲಿಕ್‌ ಸೇರಿದಂತೆ ಇನ್ನಿತರ ವಿರುದ್ಧ ಸಕಲೇಶಪುರ ಠಾಣೆಗೆ ಎಂ.ಕೆ.ಶ್ರೀಧರ್‌ ಎಂಬುವವರು ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ದೂರಿನ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಮೋದ್‌ ಅವರ ವಿರುದ್ಧ ಬಿಎನ್‌ಎಸ್‌ 2023 U/S-196(1) 353(2) 3(5) ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

8 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

9 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

10 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

11 hours ago