ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಆರ್.ಅಶೋಕ್ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳ ಬಳಿ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಮಳೆಹಾನಿ ವೀಕ್ಷಣೆಗೆ ಬಂದರೆ ಪ್ರಯೋಜನ ಆಗಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಎಚ್ಡಿಕೆ ಬಂದು ಮಳೆಹಾನಿ ವೀಕ್ಷಣೆ ಮಾಡಿ ಹೋಗಿದ್ದಾರೆ. ನೀವಾದ್ರೂ ಬರ್ತೀರಾ.? ನಿಮಗೆ ಈ ಜಾಗಗಳಿಗೆಲ್ಲಾ ಬರುವ ಯೋಗ್ಯತೆ ಇಲ್ಲಾ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಜನತೆ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ. ರಾಜ್ಯ ಸರ್ಕಾರ ಬದುಕಿದೆ ಎಂದು ತೋರಿಸಲಿ ಎಂದು ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ಇನ್ನೂ ವಾಲ್ಮೀಕಿ ನಿಗಮದ ಹಣ ಗುಳುಂ ಆಗಿರುವ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಣ ತೆಲಂಗಾಣ ಚುನಾವಣೆಗೆ ಹೋಗಿದೆ. ಈ ಹಗರಣದಿಂದ ಸಚಿವರು ಹಾಗೂ ಶಾಸಕರು ತಲೆತಗ್ಗಿಸುವಂತಾಗಿದೆ. ಈ ಹಗರಣದ ನೇರ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…