ಹಾಸನ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಹಲವೆಡೆ ಭಾರೀ ಅವಾಂತರ

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಹೆಗ್ಗದ್ದೆ ಬಳಿ ನಿರಂತರವಾಗಿ ಭೂಕುಸಿತ ಉಂಟಾಗಿದೆ.

ಇನ್ನು ಸಕಲೇಶಪುರ ಪಟ್ಟಣದ ಹೊರ ವಲಯದ ಬೈಪಾಸ್‌ ರಸ್ತೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತವಾಗಿದೆ. ರಸ್ತೆಯ ಸುರಕ್ಷತೆಗಾಗಿ ನಿರ್ಮಿಸಲಾಗಿದ್ದ ತಡೆಗೋಡೆಗೂ ಸಂಪೂರ್ಣ ಹಾನಿಯಾಗಿದೆ.

ಸಕಲೇಶಪುರದ ಹಲವಡೆ ಭಾರೀ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಹಲವು ಮನೆಗಳ ಗೋಡೆಗಳು ಹಾಗೂ ಶಾಲೆಯ ಗೋಡೆ ಸಹ ಕುಸಿತವಾಗಿದೆ. ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

32 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

48 mins ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

3 hours ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

20 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

23 hours ago