ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ.
ಈ ಬಾರಿ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಬೆಟ್ಟ ಹಚ್ಚ ಹಸಿರಿನಿಂದ ಕೂಡಿದ್ದು, ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ.
ಬೆಟ್ಟದ ತುದಿಯಲ್ಲಿರುವ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೂ ಸಹ ಸಾರ್ವಜನಿಕರು ಹೆಚ್ಚು ಹೆಚ್ಚು ಭೇಟಿ ನೀಡುತ್ತಿದ್ದು, ಹಚ್ಚ ಹಸಿರಿನಿಂದ ಕೂಡಿರುವ ಬೆಟ್ಟವನ್ನು ನೋಡಿ ಖುಷಿಪಡುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆಯಲ್ಲಿ ಜಾಸ್ತಿಯಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಪರಿಸರ ಇಲಾಖೆ ಸೂಚನೆ ನೀಡಿದ್ದು, ಪ್ರವಾಸಿಗರು ಪ್ಲಾಸ್ಟಿಕ್ ಸೇರಿದಂತೆ ಇತರೆ ವಸ್ತುಗಳನ್ನು ಇಲ್ಲಿನ ಪರಿಸರದಲ್ಲಿ ಬಿಸಾಡಿ ಹೋಗದಂತೆ ಮನವಿ ಮಾಡಿದೆ.
ಮಳೆಯ ನಡುವೆಯೂ ಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…