ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ.
ಈ ಬಾರಿ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಬೆಟ್ಟ ಹಚ್ಚ ಹಸಿರಿನಿಂದ ಕೂಡಿದ್ದು, ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ.
ಬೆಟ್ಟದ ತುದಿಯಲ್ಲಿರುವ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೂ ಸಹ ಸಾರ್ವಜನಿಕರು ಹೆಚ್ಚು ಹೆಚ್ಚು ಭೇಟಿ ನೀಡುತ್ತಿದ್ದು, ಹಚ್ಚ ಹಸಿರಿನಿಂದ ಕೂಡಿರುವ ಬೆಟ್ಟವನ್ನು ನೋಡಿ ಖುಷಿಪಡುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆಯಲ್ಲಿ ಜಾಸ್ತಿಯಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಪರಿಸರ ಇಲಾಖೆ ಸೂಚನೆ ನೀಡಿದ್ದು, ಪ್ರವಾಸಿಗರು ಪ್ಲಾಸ್ಟಿಕ್ ಸೇರಿದಂತೆ ಇತರೆ ವಸ್ತುಗಳನ್ನು ಇಲ್ಲಿನ ಪರಿಸರದಲ್ಲಿ ಬಿಸಾಡಿ ಹೋಗದಂತೆ ಮನವಿ ಮಾಡಿದೆ.
ಮಳೆಯ ನಡುವೆಯೂ ಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…