ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ.
ಈ ಬಾರಿ ಮುಂಗಾರು ಮಳೆ ಧಾರಾಕಾರವಾಗಿ ಸುರಿದ ಪರಿಣಾಮ ಬೆಟ್ಟ ಹಚ್ಚ ಹಸಿರಿನಿಂದ ಕೂಡಿದ್ದು, ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಾಗಿದೆ.
ಬೆಟ್ಟದ ತುದಿಯಲ್ಲಿರುವ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೂ ಸಹ ಸಾರ್ವಜನಿಕರು ಹೆಚ್ಚು ಹೆಚ್ಚು ಭೇಟಿ ನೀಡುತ್ತಿದ್ದು, ಹಚ್ಚ ಹಸಿರಿನಿಂದ ಕೂಡಿರುವ ಬೆಟ್ಟವನ್ನು ನೋಡಿ ಖುಷಿಪಡುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆಯಲ್ಲಿ ಜಾಸ್ತಿಯಾದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಪರಿಸರ ಇಲಾಖೆ ಸೂಚನೆ ನೀಡಿದ್ದು, ಪ್ರವಾಸಿಗರು ಪ್ಲಾಸ್ಟಿಕ್ ಸೇರಿದಂತೆ ಇತರೆ ವಸ್ತುಗಳನ್ನು ಇಲ್ಲಿನ ಪರಿಸರದಲ್ಲಿ ಬಿಸಾಡಿ ಹೋಗದಂತೆ ಮನವಿ ಮಾಡಿದೆ.
ಮಳೆಯ ನಡುವೆಯೂ ಬೆಟ್ಟಕ್ಕೆ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…