ಹಾಸನ

ಅರ್ಜುನನ ಜೊತೆ ನನ್ನನ್ನೂ ಮಣ್ಣು ಮಾಡಿ : ಮಾವುತ ವಿನು ಭಾವುಕ

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ.

ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಮಾವುತ ವಿನು ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಅರ್ಜುನನನ್ನು ಮೈಸೂರಿಗೆ ಕಳುಹಿಸಿಕೊಡಿ ಇಲ್ಲದಿದ್ದರೆ ಅವನ ಜೊತೆ ನನ್ನನ್ನೂ ಮತ್ತು ನನ್ನ ಕುಟುಂಬವನ್ನೂ ಮಣ್ಣು ಮಾಡಿ. ನನ್ನ ಹೆಂಡತಿ ಮಕ್ಕಳಿಗೆ ಅವನು ಸತ್ತಿಲ್ಲ ಅಂತಾ ಹೇಳಿದ್ದೀನಿ ನನ್ನ ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.

ಮಾವುತ ವಿನು ಅವರು ಅರ್ಜುನನೊಟ್ಟಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನೆನ್ನೆ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದ ವಿನು ಅವರನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಂಬುಲೆನ್ಸ್‌ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಕೊಂಚ ಚೇತರಿಸಿಕೊಂಡು ಅರ್ಜುನನ ಅಂತ್ಯಕ್ರಿಯೆಗೆ ಬಂದಿದ್ದ ವಿನು ತಮ್ಮ ಪ್ರೀತಿಯ ಅರ್ಜುನನನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.

ವೀರಮರಣವನ್ನಪ್ಪಿದ ಅರ್ಜುನನ ಅಂತ್ಯಕ್ರಿಯೆಗೆ ಅಭಿಮಾನಿಗಳ ದಂಡೇ ಹರಿದುಬಂದು ಅಂತಿಮ ನಮನ ಸಲ್ಲಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ವಲಯದ ದಬ್ಬಳಿಕಟ್ಟೆ ಸಮೀಪವಿರುವ ಕೆಎಫ್ ಡಿಸಿ ನೆಡುತೋಪಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರು ಅರಮನೆಯ ರಾಜ ಪುರೋಹಿತರ ನೇತೃತ್ವದಲ್ಲಿ ಅರ್ಜುನನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯ್ತು.

ಎಂಟು ವರ್ಷಗಳ ಕಾಲ ನಾಡ ಹಬ್ಬ ದಸರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ 64 ವರ್ಷದ ಅರ್ಜುನನಿಗೆ ಜಿಲ್ಲಾಡಳಿತದಿಂದ ಅಪರ ಜಿಲ್ಲಾಧಿಕಾರಿಗಳಾದ ಆರ್ .ಲೋಕನಾಥ್ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

lokesh

Recent Posts

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

9 seconds ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

8 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

13 mins ago

ಹೆಬ್ಬಾತು ಹಕ್ಕಿಗಳ ಸ್ವರ್ಗ ಹದಿನಾರು ಕೆರೆ!

ಮೈಸೂರು: ಸಾವಿರಾರು ಕಿ.ಮೀ. ದೂರದಿಂದ ವಲಸೆ ಬರುವ ಹಕ್ಕಿಗಳಿಗೆ ಅದರಲ್ಲೂ ವಿಶೇಷವಾಗಿ ಮಂಗೋಲಿಯಾದಿಂದ ಸಾವಿರಾರು ಕಿಲೋಮೀಟರ್ ದೂರ ವಲಸೆ ಬರುವ…

17 mins ago

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ ಎಚ್.ಡಿ.ಕೋಟೆ: ಪುರಸಭೆಯಲ್ಲಿ…

20 mins ago

ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯತ್ತ ಆಕಾಂಕ್ಷಿಗಳ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಜನಪ್ರತಿನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ಅಧಿಕಾರದಲ್ಲೇ ಮುಂದಿನ ಏಪ್ರಿಲ್ ತಿಂಗಳಲ್ಲಿ ಐದು ವರ್ಷಗಳನ್ನು ಪೂರೈಸುತ್ತಿರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ…

26 mins ago