ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ.
ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.
ಮಾವುತ ವಿನು ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಅರ್ಜುನನನ್ನು ಮೈಸೂರಿಗೆ ಕಳುಹಿಸಿಕೊಡಿ ಇಲ್ಲದಿದ್ದರೆ ಅವನ ಜೊತೆ ನನ್ನನ್ನೂ ಮತ್ತು ನನ್ನ ಕುಟುಂಬವನ್ನೂ ಮಣ್ಣು ಮಾಡಿ. ನನ್ನ ಹೆಂಡತಿ ಮಕ್ಕಳಿಗೆ ಅವನು ಸತ್ತಿಲ್ಲ ಅಂತಾ ಹೇಳಿದ್ದೀನಿ ನನ್ನ ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.
ಮಾವುತ ವಿನು ಅವರು ಅರ್ಜುನನೊಟ್ಟಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನೆನ್ನೆ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದ ವಿನು ಅವರನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಕೊಂಚ ಚೇತರಿಸಿಕೊಂಡು ಅರ್ಜುನನ ಅಂತ್ಯಕ್ರಿಯೆಗೆ ಬಂದಿದ್ದ ವಿನು ತಮ್ಮ ಪ್ರೀತಿಯ ಅರ್ಜುನನನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.
ವೀರಮರಣವನ್ನಪ್ಪಿದ ಅರ್ಜುನನ ಅಂತ್ಯಕ್ರಿಯೆಗೆ ಅಭಿಮಾನಿಗಳ ದಂಡೇ ಹರಿದುಬಂದು ಅಂತಿಮ ನಮನ ಸಲ್ಲಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ವಲಯದ ದಬ್ಬಳಿಕಟ್ಟೆ ಸಮೀಪವಿರುವ ಕೆಎಫ್ ಡಿಸಿ ನೆಡುತೋಪಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರು ಅರಮನೆಯ ರಾಜ ಪುರೋಹಿತರ ನೇತೃತ್ವದಲ್ಲಿ ಅರ್ಜುನನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯ್ತು.
ಎಂಟು ವರ್ಷಗಳ ಕಾಲ ನಾಡ ಹಬ್ಬ ದಸರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ 64 ವರ್ಷದ ಅರ್ಜುನನಿಗೆ ಜಿಲ್ಲಾಡಳಿತದಿಂದ ಅಪರ ಜಿಲ್ಲಾಧಿಕಾರಿಗಳಾದ ಆರ್ .ಲೋಕನಾಥ್ ಅವರು ಶ್ರದ್ಧಾಂಜಲಿ ಸಲ್ಲಿಸಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…