ಹಾಸನ

ಅರ್ಜುನನ ಜೊತೆ ನನ್ನನ್ನೂ ಮಣ್ಣು ಮಾಡಿ : ಮಾವುತ ವಿನು ಭಾವುಕ

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ.

ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಮಾವುತ ವಿನು ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಅರ್ಜುನನನ್ನು ಮೈಸೂರಿಗೆ ಕಳುಹಿಸಿಕೊಡಿ ಇಲ್ಲದಿದ್ದರೆ ಅವನ ಜೊತೆ ನನ್ನನ್ನೂ ಮತ್ತು ನನ್ನ ಕುಟುಂಬವನ್ನೂ ಮಣ್ಣು ಮಾಡಿ. ನನ್ನ ಹೆಂಡತಿ ಮಕ್ಕಳಿಗೆ ಅವನು ಸತ್ತಿಲ್ಲ ಅಂತಾ ಹೇಳಿದ್ದೀನಿ ನನ್ನ ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.

ಮಾವುತ ವಿನು ಅವರು ಅರ್ಜುನನೊಟ್ಟಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನೆನ್ನೆ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದ ವಿನು ಅವರನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಂಬುಲೆನ್ಸ್‌ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಕೊಂಚ ಚೇತರಿಸಿಕೊಂಡು ಅರ್ಜುನನ ಅಂತ್ಯಕ್ರಿಯೆಗೆ ಬಂದಿದ್ದ ವಿನು ತಮ್ಮ ಪ್ರೀತಿಯ ಅರ್ಜುನನನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ.

ವೀರಮರಣವನ್ನಪ್ಪಿದ ಅರ್ಜುನನ ಅಂತ್ಯಕ್ರಿಯೆಗೆ ಅಭಿಮಾನಿಗಳ ದಂಡೇ ಹರಿದುಬಂದು ಅಂತಿಮ ನಮನ ಸಲ್ಲಿಸಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ವಲಯದ ದಬ್ಬಳಿಕಟ್ಟೆ ಸಮೀಪವಿರುವ ಕೆಎಫ್ ಡಿಸಿ ನೆಡುತೋಪಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರು ಅರಮನೆಯ ರಾಜ ಪುರೋಹಿತರ ನೇತೃತ್ವದಲ್ಲಿ ಅರ್ಜುನನ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯ್ತು.

ಎಂಟು ವರ್ಷಗಳ ಕಾಲ ನಾಡ ಹಬ್ಬ ದಸರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ 64 ವರ್ಷದ ಅರ್ಜುನನಿಗೆ ಜಿಲ್ಲಾಡಳಿತದಿಂದ ಅಪರ ಜಿಲ್ಲಾಧಿಕಾರಿಗಳಾದ ಆರ್ .ಲೋಕನಾಥ್ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago