Mysore
24
broken clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ.

ಉಮಾಶಂಕರ್(‌40) ತಾಯಿಯನ್ನು ಕೊಲ್ಲಲು ಯತ್ನಿಸಿದ ಮಗ. ಗಂಗಮ್ಮ ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಾಯಿ.

ಗಂಗಮ್ಮ ಮಗನಿಗೆ ಮದುವೆ ಮಾಡಲು ಹಲವೆಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ ಕಳೆದ ವರ್ಷ ಉಮಾಶಂಕರ್‌ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್‌ ಬರುವಾಗ ಅಪಘಾತವಾಗಿತ್ತು. ಇದರಿಂದ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಪರಿಣಾಮ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ ಉಮಾಶಂಕರ್‌ ತಾಯಿ ಜೊತೆ ಜಗಳ ತೆಗೆದು ಕೊಲೆ ಮಾಡಲು ಯತ್ನಿಸಿದ್ದಾನೆ.

ಗಾಯಾಳು ತಾಯಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿ ಉಮಾಶಂಕರ್‌ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

Tags:
error: Content is protected !!