ಹಾಸನ

ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಜ್ಜೆ ಹೆಜ್ಜೆಗೂ ತಪ್ಪು ಹುಡುಕುವ ಕೆಲಸ ನಡೆಯುತ್ತಿದೆ; ಯತೀಂದ್ರ ಸಿದ್ದರಾಮಯ್ಯ ಆರೋಪ

ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.

ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಬೆಂಬಲದಿಂದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗದ ರಾಜಕಾರಣಿಗಳು ಇಂತಹ ರಾಜಕೀಯ ಬೆಳವಣಿಗೆ ಹೊಂದುವುದು ಅಷ್ಟು ಸುಲಭದ ಮಾತಲ್ಲ ಎಂದರು.

ಇಲ್ಲಿನ ಸಂಸದ ಶ್ರೇಯಸ್‌ ಪಟೇಲ್‌ ಅವರು ವಿಧಾನಸಭೆ ಸೋಲಿನಿಂದ ಹತಾಶರಾಗದೇ ಜನರ ನಿರಂತರ ಒಲವು ಗಳಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಅವರು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಮನೋಭಾವ ಹೊಂದಿದ್ದಾರೆ ಎಂದು ಖುಷಿಪಟ್ಟರು.

ಹೊಳೆನರಸೀಪುರ ತಾಲ್ಲೂಕಿನಲ್ಲಿ ಜಾತಿ ವೈಷಮ್ಯ, ಅಭಿವೃದ್ಧಿ ತಾರತಮ್ಯ ಇದೆ ಎಂದು ನಾನು ಬಲ್ಲೆ. ಇಲ್ಲಿನ ಕಾಂಗ್ರೆಸ್‌ ಕಾರ್ಯಕರ್ತರು 20 ವರ್ಷದಿಂದ ತುಳಿತಕ್ಕೊಳಗಾಗಿ, ತಾರತಮ್ಯದ ನೋವು ಅನುಭವಿಸಿದ್ದಾರೆ. ಹಲವು ಕೆಲಸ ಆಗಬೇಕೆಂದು ನಮ್ಮ ಗಮನಕ್ಕೆ ತಂದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇನೆ. ಅದರಲ್ಲೂ ಹಾಸನದ ಹಳ್ಳಿ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago