ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಬೆಂಬಲದಿಂದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗದ ರಾಜಕಾರಣಿಗಳು ಇಂತಹ ರಾಜಕೀಯ ಬೆಳವಣಿಗೆ ಹೊಂದುವುದು ಅಷ್ಟು ಸುಲಭದ ಮಾತಲ್ಲ ಎಂದರು.
ಇಲ್ಲಿನ ಸಂಸದ ಶ್ರೇಯಸ್ ಪಟೇಲ್ ಅವರು ವಿಧಾನಸಭೆ ಸೋಲಿನಿಂದ ಹತಾಶರಾಗದೇ ಜನರ ನಿರಂತರ ಒಲವು ಗಳಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಅವರು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಮನೋಭಾವ ಹೊಂದಿದ್ದಾರೆ ಎಂದು ಖುಷಿಪಟ್ಟರು.
ಹೊಳೆನರಸೀಪುರ ತಾಲ್ಲೂಕಿನಲ್ಲಿ ಜಾತಿ ವೈಷಮ್ಯ, ಅಭಿವೃದ್ಧಿ ತಾರತಮ್ಯ ಇದೆ ಎಂದು ನಾನು ಬಲ್ಲೆ. ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು 20 ವರ್ಷದಿಂದ ತುಳಿತಕ್ಕೊಳಗಾಗಿ, ತಾರತಮ್ಯದ ನೋವು ಅನುಭವಿಸಿದ್ದಾರೆ. ಹಲವು ಕೆಲಸ ಆಗಬೇಕೆಂದು ನಮ್ಮ ಗಮನಕ್ಕೆ ತಂದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇನೆ. ಅದರಲ್ಲೂ ಹಾಸನದ ಹಳ್ಳಿ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…