ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಬೆಂಬಲದಿಂದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗದ ರಾಜಕಾರಣಿಗಳು ಇಂತಹ ರಾಜಕೀಯ ಬೆಳವಣಿಗೆ ಹೊಂದುವುದು ಅಷ್ಟು ಸುಲಭದ ಮಾತಲ್ಲ ಎಂದರು.
ಇಲ್ಲಿನ ಸಂಸದ ಶ್ರೇಯಸ್ ಪಟೇಲ್ ಅವರು ವಿಧಾನಸಭೆ ಸೋಲಿನಿಂದ ಹತಾಶರಾಗದೇ ಜನರ ನಿರಂತರ ಒಲವು ಗಳಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಅವರು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಮನೋಭಾವ ಹೊಂದಿದ್ದಾರೆ ಎಂದು ಖುಷಿಪಟ್ಟರು.
ಹೊಳೆನರಸೀಪುರ ತಾಲ್ಲೂಕಿನಲ್ಲಿ ಜಾತಿ ವೈಷಮ್ಯ, ಅಭಿವೃದ್ಧಿ ತಾರತಮ್ಯ ಇದೆ ಎಂದು ನಾನು ಬಲ್ಲೆ. ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು 20 ವರ್ಷದಿಂದ ತುಳಿತಕ್ಕೊಳಗಾಗಿ, ತಾರತಮ್ಯದ ನೋವು ಅನುಭವಿಸಿದ್ದಾರೆ. ಹಲವು ಕೆಲಸ ಆಗಬೇಕೆಂದು ನಮ್ಮ ಗಮನಕ್ಕೆ ತಂದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಅವರ ಬಳಿ ಮಾತನಾಡುತ್ತೇನೆ. ಅದರಲ್ಲೂ ಹಾಸನದ ಹಳ್ಳಿ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…