ಹಾಸನ

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

andolana

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

4 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

4 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

5 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

6 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

6 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

6 hours ago