ಹಾಸನ

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

andolana

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

3 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

4 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

5 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

5 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

5 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

6 hours ago