ಹಾಸನ

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

andolana

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

2 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

2 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

3 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

5 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

6 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

8 hours ago