ಹಾಸನ

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಭಕ್ತರು ವಾಪಾಸು ತೆರಳಿದ ಘಟನೆ ನಡದದಿದೆ. ಭಕ್ತಾಧಿಗಳ ಸಂಖ್ಯೆಯಲ್ಲಿ ಇದರಿಂದಾಗಿ ಗಣನೀಯ ಇಳಿಕೆ ಕಂಡಿದೆ.

ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.

ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago