ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ.
ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ ತನಕ ಸ್ಪರ್ಶ ಮಾಡಿರಲಿಲ್ಲ. ಮಳೆ, ಮೋಡ ಕವಿದ ವಾತಾವರಣದಿಂದ ವಿಗ್ರಹದ ಮೇಲೆ ಸೂರ್ಯನ ರಶ್ಮಿ ಬೀಳಲು ಅಡ್ಡಿ ಉಂಟಾಗಿತ್ತು. ಈ ವರ್ಷ ಅಡೆತಡೆ ನಿವಾರಣೆಯಾಗಿದ್ದು, ಭಕ್ತರಲ್ಲಿ ಸಾರ್ಥಕದ ಕ್ಷಣ ಮನೆ ಮಾಡಿದೆ.
ಇಂದು ಬೆಳಿಗ್ಗೆ 6 ಗಂಟೆ 15 ನಿಮಿಷಕ್ಕೆ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹದ ಮೇಲೆ ಬಿದ್ದ ಸೂರ್ಯನ ರಶ್ಮಿ, 6 ಗಂಟೆ 42 ನಿಮಿಷಕ್ಕೆ ನವರಂಗ ದ್ವಾರ ದಾಟಿ ಹೋದ ಸೂರ್ಯನ ರಶ್ಮಿಗಳು ದೇವರ ವಿಗ್ರಹದ ಮೇಲೆ ಬೀಳುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು.
ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸುತ್ತಿದ್ದಂತೆ ಗರ್ಭಗುಡಿ ಬಂದ್ ಮಾಡಲಾಯಿತು.
ಪ್ರತಿ ವರ್ಷ ಜಾತ್ರೆ ಮುಗಿದ ನಂತರ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಪ್ರವೇಶಿಸುವ ಸೂರ್ಯನ ರಶ್ಮಿ ಬೀಳುವುದನ್ನು ಕಂಡ ಭಕ್ತರು ಕೃತಾರ್ಥರಾದರು.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…