ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4 ವರ್ಷಗಳ ಬಳಿಕ ಸೂರ್ಯನ ರಶ್ಮಿ ಮತ್ತೊಮ್ಮೆ ಸ್ಪರ್ಶ ಮಾಡಿದೆ.
ಕಳೆದ 2021ರಲ್ಲಿ ದೇವಾಲಯ ಪ್ರವೇಶ ಮಾಡಿದ್ದ ಸೂರ್ಯನ ರಶ್ಮಿ, 2024ರ ತನಕ ಸ್ಪರ್ಶ ಮಾಡಿರಲಿಲ್ಲ. ಮಳೆ, ಮೋಡ ಕವಿದ ವಾತಾವರಣದಿಂದ ವಿಗ್ರಹದ ಮೇಲೆ ಸೂರ್ಯನ ರಶ್ಮಿ ಬೀಳಲು ಅಡ್ಡಿ ಉಂಟಾಗಿತ್ತು. ಈ ವರ್ಷ ಅಡೆತಡೆ ನಿವಾರಣೆಯಾಗಿದ್ದು, ಭಕ್ತರಲ್ಲಿ ಸಾರ್ಥಕದ ಕ್ಷಣ ಮನೆ ಮಾಡಿದೆ.
ಇಂದು ಬೆಳಿಗ್ಗೆ 6 ಗಂಟೆ 15 ನಿಮಿಷಕ್ಕೆ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹದ ಮೇಲೆ ಬಿದ್ದ ಸೂರ್ಯನ ರಶ್ಮಿ, 6 ಗಂಟೆ 42 ನಿಮಿಷಕ್ಕೆ ನವರಂಗ ದ್ವಾರ ದಾಟಿ ಹೋದ ಸೂರ್ಯನ ರಶ್ಮಿಗಳು ದೇವರ ವಿಗ್ರಹದ ಮೇಲೆ ಬೀಳುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು.
ಸೂರ್ಯನ ರಶ್ಮಿ ಶ್ರೀ ಚನ್ನಕೇಶವಸ್ವಾಮಿ ವಿಗ್ರಹ ಸ್ಪರ್ಶಿಸುತ್ತಿದ್ದಂತೆ ಗರ್ಭಗುಡಿ ಬಂದ್ ಮಾಡಲಾಯಿತು.
ಪ್ರತಿ ವರ್ಷ ಜಾತ್ರೆ ಮುಗಿದ ನಂತರ ಶ್ರೀ ಚನ್ನಕೇಶವಸ್ವಾಮಿ ದೇವಾಲಯ ಪ್ರವೇಶಿಸುವ ಸೂರ್ಯನ ರಶ್ಮಿ ಬೀಳುವುದನ್ನು ಕಂಡ ಭಕ್ತರು ಕೃತಾರ್ಥರಾದರು.
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…