ಹಾಸನ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್‌ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ.

ಇದನ್ನು ಓದಿ : ಹಾಸನಾಂಭ ದರ್ಶನ | ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯಿಂದ ಹೆಚ್ಚುವರಿ ಬಸ್‌

ಈ ವೇಳೆ ಸಚಿವ ಕೃಷ್ಣಭೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದ ಶ್ರೇಯಸ್‌ ಪಟೇಲ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಆಶ್ವೀಜ ಮಾಸದ ಮೊದಲ ಗುರುವಾರ ಅರಸು ವಂಶಸ್ಥರು ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ನಾಳೆಯಿಂದ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದು, ತಾಯಿಯ ದರ್ಶನಕ್ಕೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

ಬಲಿಪಾಡ್ಯಮಿಯ ಮಾರನೇಯ ದಿನ ಗಣ್ಯರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ, ನೈವೇದ್ಯಾ ಸೇರಿದಂತೆ ವಿವಿಧ ಅಲಂಕಾರಗಳು ಇರುವಂತೆಯೇ ಬಾಗಿಲನ್ನು ಮುಚ್ಚಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago