ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ.
ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ ಗಣಪತಿ ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ ಹಾಗೂ ನವಗ್ರಹ ಪೂಜೆ ಸಲ್ಲಿಸಲಾಯಿತು. ಅಲ್ಲದೇ ಯಾತ್ರಾದಾನೋತ್ಸವ ಸೇವೆ ನೆರವೇರಿಸಲಾಗಿದೆ.
ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಹೊರಗೆ ತಂದು ಪ್ರದಕ್ಷಿಣೆ ಹಾಕಿದ ಬಳಿಕ ದೇವಸ್ಥಾನ ಎದುರಿದ್ದ ಅಲಂಕೃತ ರಥದ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಭಕ್ತರು ಸಂತಸದಿಂದ ತೇರು ಎಳೆದರು. ನಂತರ ರಥ ಬೀದಿಯಲ್ಲಿ ತೇರು ಮುಂದೆ ಚಲಿಸುತ್ತಿರುವಾಗ ಭಕ್ತರು ಹಣ್ಣು ಮತ್ತು ಧವನವನ್ನು ಎಸೆದು ಸಂತಸ ಪಟ್ಟಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…