ಹಾಸನ

ಇದು 1 ವರ್ಷ 8 ತಿಂಗಳ ಪುಟ್ಟ ಪೋರಿಯ ಸಾಧನೆ

ಹಾಸನ: 1 ವರ್ಷ 8 ತಿಂಗಳ ಪುಟ್ಟ ಪೋರಿ 215ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ.

ಹಾಸನದ ನಾಗರನವಿಲೆಯಲ್ಲಿ ವಾಸವಿದ್ದ ರಾಹುಲ್‌ ಹಾಗೂ ರಮ್ಯಾ ದಂಪತಿಯ ಪುತ್ರಿ ರಾಮರಕ್ಷಾ ಎಂಬಾಕೆ 215ಕ್ಕಿಂತಲೂ ಹೆಚ್ಚು ವಿವಿಧ ಚಟುವಟಿಕೆಗಳನ್ನು ಮಾಡುವ ಮೂಲಕ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾಳೆ.

ರಾಹುಲ್‌ ಹಾಗೂ ರಮ್ಯಾ ದಂಪತಿ ಕೆಲಸದ ನಿಮಿತ್ತ ಕಾರವಾರದಲ್ಲಿದ್ದು, ಮಗಳ ಈ ಸಾಧನೆಯಿಂದ ಸಂತೋಷಗೊಂಡಿದ್ದಾರೆ.

1 ವರ್ಷ 8 ತಿಂಗಳ ವಯಸ್ಸಿನಲ್ಲಿ ಪುಟ್ಟ ಪೋರಿ ರಾಮರಕ್ಷಾ 200ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ಮಕ್ಕಳ ವಿಭಾಗದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾಳೆ.

100ಕ್ಕೂ ಫ್ಲಾಶ್ ಕಾರ್ಡ್‌ಗಳ ಗುರುತಿಸುವಿಕೆ ಜೊತೆಗೆ ದೇವರ ಹೆಸರುಗಳು, ದಶಾವತಾರ, ಮಂತ್ರ, ಶ್ಲೋಕಗಳು, ದೇವರವಾಹನಗಳನ್ನು ಹೇಳುತ್ತಾಳೆ.

ಜೊತೆಗೆ 25ಕ್ಕೂ ಹೆಚ್ಚು ತರಕಾರಿಗಳ ಹೆಸರು, 30ಕ್ಕೂ ಹೆಚ್ಚು ಹಣ್ಣುಗಳ ಹಾಗೂ ಪ್ರಾಣಿಗಳ ಹೆಸರನ್ನು ಹೇಳಲಿದ್ದು, ಜೊತೆಗೆ ಕನ್ನಡ ವರ್ಣಮಾಲೆ, ಎಲೆಕ್ಟ್ರಾನಿಕ್ ಸಾಧನಗಳು, ರಾಷ್ಟ್ರೀಯ ಧ್ವಜ, ಭಾರತೀಯ ಕರೆನ್ಸಿ, ಭಾರತದ ಸ್ಮಾರಕಗಳು, ವಿಜ್ಞಾನಿ ಹೆಸರುಗಳು, 10ಕ್ಕೂ ಹೆಚ್ಚು ಹೂವುಗಳ ಹೆಸರುಗಳು, ಗಣಿತ ಚಿಹ್ನೆಗಳು, 38ಕ್ಕೂ ದಿನಸಿ ವಸ್ತುಗಳು, ಒಣಹಣ್ಣುಗಳ ಹೆಸರನ್ನು ಹೇಳುತ್ತಾಳೆ.

ಜೊತೆಗೆ ಮಳೆಬಿಲ್ಲಿನ ಬಣ್ಣಗಳು, ಪಂಚಭೂತಗಳು, ನವಗ್ರಹಗಳು, ವಾರಗಳು, ತಿಂಗಳುಗಳು, ಗ್ರಹಗಳು, ಸಂಚಾರ ಸಂಕೇತಗಳು, ಮಾಯಾ ಪದಗಳು, ಆಹಾರದ ಹೆಸರುಗಳು, ವೈವಿಧ್ಯಮಯ ಪ್ರಾಣಿಗಳು ಮತ್ತು ಅದರ ಶಬ್ದ, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ವಿರುದ್ಧಾರ್ಥಕ ಪದಗಳನ್ನು ಹೇಳಲಿದ್ದು, ಎಲ್ಲರನ್ನು ಅಚ್ಚರಿಗೊಳಿಸುತ್ತಿದ್ದಾಳೆ.

ಇವೆಲ್ಲದರ ಜೊತೆಗೆ ಆಟಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರುಗಳು, ಗ್ರಹಗಳು, ಸನ್ನೆಗಳು ಸೇರಿದಂತೆ ಅನೇಕ ಚಟುವಟಿಕೆ ಮಾಡಲಿದ್ದಾಳೆ.

ಇದೆಲ್ಲಾ ಸಾಧನೆ ಮಾಡಿದ ಪುಟ್ಟ ಪೋರಿ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌, ವಲ್ಡ್‌ ರೆಕಾರ್ಡ್, ಸೂಪರ್‌ ಅಚೀವರ್‌ ಅವಾರ್ಡ್‌ 2025, ಕರ್ನಾಟಕ ಬುಕ್‌ ಆಫ್‌ ರೆಕಾರ್ಡ್‌ ಗೌರವಕ್ಕೆ ಪಾತ್ರರಾಗಿದ್ದಾಳೆ.

 

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago