ಹಾಸನ

ಇದು 1 ವರ್ಷ 8 ತಿಂಗಳ ಪುಟ್ಟ ಪೋರಿಯ ಸಾಧನೆ

ಹಾಸನ: 1 ವರ್ಷ 8 ತಿಂಗಳ ಪುಟ್ಟ ಪೋರಿ 215ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ.

ಹಾಸನದ ನಾಗರನವಿಲೆಯಲ್ಲಿ ವಾಸವಿದ್ದ ರಾಹುಲ್‌ ಹಾಗೂ ರಮ್ಯಾ ದಂಪತಿಯ ಪುತ್ರಿ ರಾಮರಕ್ಷಾ ಎಂಬಾಕೆ 215ಕ್ಕಿಂತಲೂ ಹೆಚ್ಚು ವಿವಿಧ ಚಟುವಟಿಕೆಗಳನ್ನು ಮಾಡುವ ಮೂಲಕ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾಳೆ.

ರಾಹುಲ್‌ ಹಾಗೂ ರಮ್ಯಾ ದಂಪತಿ ಕೆಲಸದ ನಿಮಿತ್ತ ಕಾರವಾರದಲ್ಲಿದ್ದು, ಮಗಳ ಈ ಸಾಧನೆಯಿಂದ ಸಂತೋಷಗೊಂಡಿದ್ದಾರೆ.

1 ವರ್ಷ 8 ತಿಂಗಳ ವಯಸ್ಸಿನಲ್ಲಿ ಪುಟ್ಟ ಪೋರಿ ರಾಮರಕ್ಷಾ 200ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ಮಕ್ಕಳ ವಿಭಾಗದಲ್ಲಿ ಹೊಸ ದಾಖಲೆಯನ್ನು ನಿರ್ಮಿಸಿದ್ದಾಳೆ.

100ಕ್ಕೂ ಫ್ಲಾಶ್ ಕಾರ್ಡ್‌ಗಳ ಗುರುತಿಸುವಿಕೆ ಜೊತೆಗೆ ದೇವರ ಹೆಸರುಗಳು, ದಶಾವತಾರ, ಮಂತ್ರ, ಶ್ಲೋಕಗಳು, ದೇವರವಾಹನಗಳನ್ನು ಹೇಳುತ್ತಾಳೆ.

ಜೊತೆಗೆ 25ಕ್ಕೂ ಹೆಚ್ಚು ತರಕಾರಿಗಳ ಹೆಸರು, 30ಕ್ಕೂ ಹೆಚ್ಚು ಹಣ್ಣುಗಳ ಹಾಗೂ ಪ್ರಾಣಿಗಳ ಹೆಸರನ್ನು ಹೇಳಲಿದ್ದು, ಜೊತೆಗೆ ಕನ್ನಡ ವರ್ಣಮಾಲೆ, ಎಲೆಕ್ಟ್ರಾನಿಕ್ ಸಾಧನಗಳು, ರಾಷ್ಟ್ರೀಯ ಧ್ವಜ, ಭಾರತೀಯ ಕರೆನ್ಸಿ, ಭಾರತದ ಸ್ಮಾರಕಗಳು, ವಿಜ್ಞಾನಿ ಹೆಸರುಗಳು, 10ಕ್ಕೂ ಹೆಚ್ಚು ಹೂವುಗಳ ಹೆಸರುಗಳು, ಗಣಿತ ಚಿಹ್ನೆಗಳು, 38ಕ್ಕೂ ದಿನಸಿ ವಸ್ತುಗಳು, ಒಣಹಣ್ಣುಗಳ ಹೆಸರನ್ನು ಹೇಳುತ್ತಾಳೆ.

ಜೊತೆಗೆ ಮಳೆಬಿಲ್ಲಿನ ಬಣ್ಣಗಳು, ಪಂಚಭೂತಗಳು, ನವಗ್ರಹಗಳು, ವಾರಗಳು, ತಿಂಗಳುಗಳು, ಗ್ರಹಗಳು, ಸಂಚಾರ ಸಂಕೇತಗಳು, ಮಾಯಾ ಪದಗಳು, ಆಹಾರದ ಹೆಸರುಗಳು, ವೈವಿಧ್ಯಮಯ ಪ್ರಾಣಿಗಳು ಮತ್ತು ಅದರ ಶಬ್ದ, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ವಿರುದ್ಧಾರ್ಥಕ ಪದಗಳನ್ನು ಹೇಳಲಿದ್ದು, ಎಲ್ಲರನ್ನು ಅಚ್ಚರಿಗೊಳಿಸುತ್ತಿದ್ದಾಳೆ.

ಇವೆಲ್ಲದರ ಜೊತೆಗೆ ಆಟಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರುಗಳು, ಗ್ರಹಗಳು, ಸನ್ನೆಗಳು ಸೇರಿದಂತೆ ಅನೇಕ ಚಟುವಟಿಕೆ ಮಾಡಲಿದ್ದಾಳೆ.

ಇದೆಲ್ಲಾ ಸಾಧನೆ ಮಾಡಿದ ಪುಟ್ಟ ಪೋರಿ ಇಂಡಿಯನ್‌ ಬುಕ್‌ ಆಫ್‌ ರೆಕಾರ್ಡ್‌, ವಲ್ಡ್‌ ರೆಕಾರ್ಡ್, ಸೂಪರ್‌ ಅಚೀವರ್‌ ಅವಾರ್ಡ್‌ 2025, ಕರ್ನಾಟಕ ಬುಕ್‌ ಆಫ್‌ ರೆಕಾರ್ಡ್‌ ಗೌರವಕ್ಕೆ ಪಾತ್ರರಾಗಿದ್ದಾಳೆ.

 

ಆಂದೋಲನ ಡೆಸ್ಕ್

Recent Posts

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

4 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

19 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago