ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು.
ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು ಒಂದು ಗಂಟೆಗೂ ಹೆಚ್ಚು ಕಾಲ ಜಲಕ್ರೀಡೆಯಾಡಿ ಬಳಿಕ ರೈತರ ಜಮೀನಿಗೆ ನುಗ್ಗಿ ಬೆಳೆಯನ್ನು ನಾಶಪಡಿಸಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರ ಹೆಚ್ಚಾಗಿದ್ದು, ಕಾಫಿ, ಬಾಳೆ, ಭತ್ತ, ಶುಂಠಿ ಸೇರಿದಂತೆ ರೈತರು ಬೆಳೆದ ಎಲ್ಲಾ ಬೆಳೆಗಳನ್ನು ತುಳಿದು ನಾಶಪಡಿಸುತ್ತಿವೆ.
ಈ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂದು ಅಳಲು ತೋಡಿಕೊಂಡಿರುವ ರೈತರು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಂಜೆಯಾದರೆ ಸಾಕು ಕಾಫಿ ತೋಟದಲ್ಲೇ ಕಾಡಾನೆಗಳ ಹಿಂಡು ಲಗ್ಗೆಯಿಡುತ್ತಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಟ್ಟು ಆನೆಗಳನ್ನು ಕಾಡಿಗೆ ಓಡಿಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…