ಹಾಸನ

ಇಂದು ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ. 

ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು ಹಾಗೂ ನೈವೇದ್ಯ ಇಟ್ಟು ವಿಧಿವಿಧಾನಗಳನ್ನು ಪೂರ್ಣಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌ ರಾಜಣ್ಣ, ಶಾಸಕ ಸ್ವರೂಪ್‌ ಪ್ರಕಾಶ್‌, ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ,ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲು ಮುಚ್ಚಲಾಯ್ತು.

ಇಂದು ದೇವಾಲಯದ ಬಾಗಿಲು ಮುಚ್ಚುವ ಹಿನ್ನೆಲೆ ನೆನ್ನೆ ದೇವಿಯ ದರ್ಶನಕ್ಕಾಗಿ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿತ್ತು.ಈ ಬಾರಿ 13.5 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದರು. ನೆನ್ನೆ ವಿಶೇಷ ದರ್ಶನದ ಟಿಕೇಟ್‌ ಹಾಗೂ ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ ಹಣ ಸಂಗ್ರಹವಾಗಿತ್ತು.

12 ದಿನಗಳ ಕಾಲ ದಿನದ 24 ಗಂಟೆಯೂ ಕೂಡ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದೀಗ ಹಾಸನಾಂಬೆಯ ದರ್ಶನಕ್ಕೆ ಶಾಸ್ತ್ರೋಕ್ತವಾಗಿ ತೆರೆ ಬಿದ್ದಿದ್ದು, ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ತೆರೆ ಮರೆಗೆ ಸರಿದಿದ್ದಾಳೆ.

lokesh

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

2 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

2 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

3 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

12 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

13 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

13 hours ago