ಹಾಸನ

ಇಂದು ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ. 

ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು ಹಾಗೂ ನೈವೇದ್ಯ ಇಟ್ಟು ವಿಧಿವಿಧಾನಗಳನ್ನು ಪೂರ್ಣಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌ ರಾಜಣ್ಣ, ಶಾಸಕ ಸ್ವರೂಪ್‌ ಪ್ರಕಾಶ್‌, ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ,ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲು ಮುಚ್ಚಲಾಯ್ತು.

ಇಂದು ದೇವಾಲಯದ ಬಾಗಿಲು ಮುಚ್ಚುವ ಹಿನ್ನೆಲೆ ನೆನ್ನೆ ದೇವಿಯ ದರ್ಶನಕ್ಕಾಗಿ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿತ್ತು.ಈ ಬಾರಿ 13.5 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದರು. ನೆನ್ನೆ ವಿಶೇಷ ದರ್ಶನದ ಟಿಕೇಟ್‌ ಹಾಗೂ ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ ಹಣ ಸಂಗ್ರಹವಾಗಿತ್ತು.

12 ದಿನಗಳ ಕಾಲ ದಿನದ 24 ಗಂಟೆಯೂ ಕೂಡ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದೀಗ ಹಾಸನಾಂಬೆಯ ದರ್ಶನಕ್ಕೆ ಶಾಸ್ತ್ರೋಕ್ತವಾಗಿ ತೆರೆ ಬಿದ್ದಿದ್ದು, ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ತೆರೆ ಮರೆಗೆ ಸರಿದಿದ್ದಾಳೆ.

lokesh

Recent Posts

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 min ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

6 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

8 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

10 mins ago

ಸಿದ್ದಾಪುರದಲ್ಲೊಂದು ವಿಂಟೇಜ್ ಕಸದ ತೊಟ್ಟಿ!

ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…

17 mins ago