ಹಾಸನ

ಭೀಮನಿಗೆ ಚಿಕಿತ್ಸೆ ಸ್ಥಗಿತ : ನೋವಿನಿಂದ ನರಳಾಟ

ಹಾಸನ : ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ.

ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ ಒಂದೆರಡು ದಿನಗಳಿಂದ ಒಂದೇ ಸ್ಥಳದಲ್ಲಿ ಆನೆ ನಿಂತಿರುವುದು ಕಂಡುಬಂದಿದೆ.

ಭೀಮ ಆನೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುವ ವೇಳೆ, ಶಾರ್ಪ್ ಶೂಟರ್ ವೆಂಕಟೇಶ್ ಸಾವಿಗೀಡಾಗಿದ್ದರು. ಆಗಸ್ಟ್ 31ರಂದು ಘಟನೆ ನಡೆದಿದ್ದು, ಅಂದಿನಿಂದ ಗಾಯಗೊಂಡ ಆನೆ ಚಿಕಿತ್ಸೆಗಾಗಿ ಕಾಯುತ್ತಲೇ ಇದೆ.

ಈಮಧ್ಯೆ, ಘಟನೆ ನಂತರ ಅರಣ್ಯ ಇಲಾಖೆಯು ಆನೆಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎನ್ನಲಾಗಿದೆ. ಇದೀಗ ಸ್ಥಳೀಯರು ಗಾಯಗೊಂಡಿರುವ ಆನೆಗೆ ಚಿಕಿತ್ಸೆ ನೀಡುವಂತೆ ಇಲಾಖೆಯನ್ನು ಒತ್ತಾಯಿಸುತ್ತಿದ್ದು, ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಡಿಸಿಎಫ್ ಮೋಹನ್ ಕುಮಾರ್ ಪ್ರಕಾರ, ಆನೆಗೆ ಚಿಕಿತ್ಸೆ ನೀಡಲು ಇಲಾಖೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಯೋಜಿಸಿದೆ ಎಂದಿದ್ದಾರೆ.

ಆಲೂರು ತಾಲೂಕಿನ ಮಗ್ಗೆ ರಾಯರಕೊಪ್ಪಲು ಹಾಗೂ ಸಕಲೇಶಪುರದ ಹೆತ್ತೂರು ಭಾಗಗಳಲ್ಲಿ ಆನೆಗಳು ನಿರಂತರವಾಗಿ ಬೆಳೆದು ನಿಂತಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

lokesh

Recent Posts

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

16 mins ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

31 mins ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

55 mins ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

1 hour ago

ಕೊಡಗು | ಟೆಕ್ಕಿ ಶರಣ್ಯ ಕೊನೆಗೂ ಪತ್ತೆ

ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊ‌ನೆಗೂ ಪತ್ತೆ…

1 hour ago

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…

2 hours ago