ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ.
ಸುಧಾಮಣಿ ಅವರು ದೊಡ್ಡಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.





