ಹಾಸನ

ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ : 15ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.

ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್‌ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.

ಪಿಕ್‌ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

lokesh

Recent Posts

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

7 mins ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

36 mins ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

41 mins ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

46 mins ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

2 hours ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

2 hours ago