ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ.
ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಹಾರ್ಲೆ ಕಾಫಿ ತೋಟದ ಕೆಲಸಕ್ಕೆ ಪಿಕ್ಅಪ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಹನ ಪಲ್ಟಿಯಾಗಿದೆ.
ಪಿಕ್ಅಪ್ ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿದ್ದು, ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರ ಹಾಗೂ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…