ಹಾಸನ

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು ಯಾರು ನಿರೀಕ್ಷಿಸಿರಲಿಲ್ಲ. ಅದು ಎಲ್ಲರಿಗೂ ಅಚ್ಚರಿ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ‘60 ವರ್ಷಗಳ ಕಾಲ ಡಿಎಂಕೆ-ಎಐಎಡಿಎಂಕೆ ಎಂಬ ಎರಡು ಪ್ರಾದೇಶಿಕ ಪಕ್ಷಗಳು ಆಳ್ವಿಕೆ ನಡೆಸಿದ ತಮಿಳುನಾಡಿನಲ್ಲಿ ಮತದಾರರು ಈ ಬಾರಿ ಹೊಸ ಪರ್ಯಾಯವನ್ನು ಆರಿಸಿಕೊಂಡಿದ್ದಾರೆ. ಇದು ಕೇವಲ ಸಿನಿಮಾ ಗ್ಲಾಮರ್‌ನ ಗೆಲುವಲ್ಲ. ಜನಪರ ಆಡಳಿತದ ನಿರೀಕ್ಷೆಯ ಫಲ’ ಎಂದರು.

ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ‘ದ್ರಾವಿಡ ರಾಜಕಾರಣಕ್ಕೆ ದೊಡ್ಡ ಸಂದೇಶ’ ಆದಂತಿದೆ. ‘ಬಹುಮತ ಇಲ್ಲದಿದ್ದರೂ ಏಕೈಕ ದೊಡ್ಡ ಪಕ್ಷವಾಗಿ ಟಿವಿಕೆ ಸರ್ಕಾರ ರಚನೆ ಹಕ್ಕು ಮಂಡಿಸಿದೆ. ತಮಿಳುನಾಡಿನ ಜನರ ಹಿತದೃಷ್ಟಿಯಿಂದ ಸ್ಥಿರ ಸರ್ಕಾರ ಬರಬೇಕು. ಕಾಂಗ್ರೆಸ್ 5 ಸ್ಥಾನಗಳ ಬೆಂಬಲ ನೀಡಿದೆ. ಸಣ್ಣ ಪಕ್ಷಗಳು ರಾಷ್ಟ್ರೀಯ ಹಿತದೃಷ್ಟಿಯಿಂದ ಏನು ನಿರ್ಧಾರ ಕೈಗೊಳ್ಳುತ್ತವೆಯೊ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತಮಿಳುನಾಡಿನ ರಾಜಕಾರಣದಲ್ಲಿ ಸಿನಿಮಾದ ಪ್ರಭಾವ ಬಹಳ ಹಿಂದಿನಿಂದಲೂ ಇದೆ. ಈಗಲೂ ಅದೇ ಪ್ರಭಾವ ಕಾಣಿಸಿದೆ. ಹೊಸ ಮುಖಕ್ಕೆ ಅಧಿಕಾರ ನೀಡಬೇಕು ಎಂಬ ಮನೋಭಾವದಿಂದ ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

‘ಕರ್ನಾಟಕಕ್ಕೂ ಪಾಠ’
‘ಪ್ರಾದೇಶಿಕ ಪಕ್ಷಗಳು ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳದಿದ್ದರೆ ಪರ್ಯಾಯ ಹುಟ್ಟಿಕೊಳ್ಳುತ್ತದೆ. ತಮಿಳುನಾಡಿನ ಫಲಿತಾಂಶ ಕರ್ನಾಟಕಕ್ಕೂ ಪಾಠ. ನಾವು ಜೆಡಿಎಸ್ ಅನ್ನು ಜನರ ವಿಶ್ವಾಸ ಗಳಿಸುವ ಪಕ್ಷವನ್ನಾಗಿ ಕಟ್ಟುತ್ತೇವೆ’ ಎಂದು ಕುಮಾರಸ್ವಾಮಿ ತಿಳಿಸಿದರು.

234ರಲ್ಲಿ 108 ಸ್ಥಾನ ಟಿವಿಕೆಗೆ
ಏಪ್ರಿಲ್ 23ರಂದು ನಡೆದ ಚುನಾವಣೆಯಲ್ಲಿ 85.12% ಮತದಾನವಾಗಿತ್ತು. ಮೇ 4ರ ಫಲಿತಾಂಶದಲ್ಲಿ 2024ರಲ್ಲಿ ಸ್ಥಾಪನೆಯಾದ ಟಿವಿಕೆ 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿದೆ. ಡಿಎಂಕೆ 59, ಎಐಎಡಿಎಂಕೆ 47 ಸ್ಥಾನಗಳಿಗೆ ಕುಸಿದಿದೆ. ಬಹುಮತಕ್ಕೆ 118 ಸ್ಥಾನ ಬೇಕಿದ್ದು, ಟಿವಿಕೆ 10 ಸ್ಥಾನ ಕಡಿಮೆ ಹೊಂದಿದೆ.

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

19 mins ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago