ಹಾಸನ: ವಕ್ಫ್ ವಿರುದ್ಧ ಹೋರಾಟ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು.
ಜನ ಕಲ್ಯಾಣ ಸಮಾವೇಶದಲ್ಲಿ ಭಾಗಿಯಾಗುವ ಮುನ್ನ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ರಾಜಕೀಯಕ್ಕಾಗಿ ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ದೂರಿದರು.
೨೦೧೪ ರಲ್ಲಿ ಬಿಜೆಪಿ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಿದ್ದರು. ವಕ್ಫ್ ಆಸ್ತಿಯನ್ನು ಯಾರೆಲ್ಲಾ ಅತಿಕ್ರಮಣ ಮಾಡಿದ್ದಾರೋ ಅದೆಲ್ಲವನ್ನೂ ತೆರವು ಗೊಳಿಸುತ್ತೇವೆ ಎಂದಿದ್ದರು. ಈ ಹಿಂದೆ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಸಹ ಅದನ್ನೇ ಹೇಳಿದ್ದರು. ನಮಗಿಂತ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಅವರೇ ಎಂದು ಟಾಂಗ್ ನೀಡಿದರು.
ಅವರು ಪ್ರಣಾಳಿಕೆಯಲ್ಲಿ ಹೇಳಿದಂತೆ ನಡೆದುಕೊಂಡಿಲ್ಲ. ಅದರ ಬಗ್ಗೆ ಈಗ ಏನನ್ನೂ ಮಾತನಾಡುತ್ತಿಲ್ಲ. ಆದರೀಗ ನಮ್ಮ ವಿರುದ್ಧ ಹೋರಾಟದ ನಾಟಕ ಆಡುತ್ತಿದ್ದಾರೆ. ಇದು ರಾಜಕೀಯ ಇಬ್ಬಂದಿತನ ಎಂದು ವಾಗ್ದಾಳಿ ನಡೆದಿರು.
ಇನ್ನೇನು ಚಳಿಗಾಲದ ಅಧಿವೇಶನ ಆರಂಭ ಆಗುತ್ತಿದೆ. ಅಲ್ಲಿ ಮಾತನಾಡಲು ಅವರಿಗೆ ವಿಷಯಗಳಿಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಾವು ಮೂರನ್ನೂ ಗೆದ್ದಿದ್ದೇವೆ. ೨೫ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಜಯ ಸಾಧಿಸಿದ್ದೇವೆ. ಚನ್ನಪಟ್ಟಣದಲ್ಲೂ ಗೆದ್ದಿದ್ದೇವೆ. ಇದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ಅದಕ್ಕಾಗಿ ಅವರು ರಾಜಕೀಯ ನಾಟಕ ಶುರು ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
ಇದೆ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತರರು ಉಪಸ್ಥಿತರಿದ್ದರು.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…