ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ.
ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ
ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲೆಂದು ದಂಪತಿ ಹೋಗಿದ್ದರು. ಈ ವೇಳೆ ಪತ್ನಿ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸಲು ಹೋಗಿ ಗೋಪಾಲ್ ಕೂಡ ನೀರಿಗೆ ಧುಮುಕಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…