ಹಾಸನ

ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ: ರಕ್ಷಿಸಲು ಹೋಗಿ ಪತಿಯೂ ನೀರುಪಾಲು

ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್‌ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ.

ಇದನ್ನು ಓದಿ: ಶಾಲಾ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಆರೋಪ: ನಾಲೆಗೆ ಹಾರಿ ಯುವಕ ಆತ್ಮಹತ್ಯೆ

ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲೆಂದು ದಂಪತಿ ಹೋಗಿದ್ದರು. ಈ ವೇಳೆ ಪತ್ನಿ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸಲು ಹೋಗಿ ಗೋಪಾಲ್‌ ಕೂಡ ನೀರಿಗೆ ಧುಮುಕಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

45 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago