ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ.
ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಶುರುಮಾಡಿದೆ.
ಸಾಕಾನೆಗಳನ್ನು ಬಳಸಿಕೊಂಡು ಪುಂಡಾಟ ಆಡುತ್ತಿರುವ ಆನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸಪಟ್ಟಿದ್ದಾರೆ.
ಇಂದು ಏಳು ಕುಮ್ಕಿ ಆನೆಗಳನ್ನು ಬಳಸಿಕೊಂಡು ಎರಡು ಕಾಡಾನೆಗಳನ್ನು ಬೇರ್ಪಡಿಸಿದ್ದಾರೆ.
ನಂತರ ಒಂಟಿಸಲಗ ಕುಸಿದು ಬಿದ್ದಿದ್ದು, ಅದಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಕ್ರೇನ್ ಮೂಲಕ ಲಾರಿಗೆ ಶಿಫ್ಟ್ ಮಾಡಿದ್ದಾರೆ.
ಸೆರೆಯಾದ ಆನೆಯು ಸಂಪೂರ್ಣ ಚೇತರಿಕೆಯಾದಾಗ ಬೇರೆ ಕಾಡಿಗೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪುಂಡಾಟ ನಡೆಸುತ್ತಿರುವ ಆನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಬಿಡುವುದಕ್ಕೆ ಸರ್ಕಾರ ಈಗಾಗಲೇ ಸಮ್ಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆಯೂ ಕಾರ್ಯಾಚರಣೆ ನಡೆಸುವ ಸಾಧ್ಯತೆಯಿದ್ದು, ಆನೆಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…